ಎರಡನೆಯ ಬಾರಿಗೆ ಈ ಮಕ್ಕಳನ್ನು ರಸ್ತೆಯಲ್ಲಿ ಸಿಕ್ಕರು ಎನ್ನುವ ಕಾರಣಕ್ಕೆ ಪೋಲೀಸರು ತಂದು ನಿಲ್ಲಿಸಿದ್ದರು. ಕಂಕುಳಲ್ಲಿ ಒಣಗಿದ ಪಿಳ್ಳೆಯೊಂದನ್ನು ಎತ್ತಿಕೊಂಡು, ಸಿಂಬಳ ಸುರಿಸುತ್ತಾ ತಪ್ಪು ಹೆಜ್ಜೆ ಇಡುತ್ತಿದ್ದ ಇನ್ನೊಂದು ಮಗುವೊಂದನ್ನು ದರದರ ಎಳೆದುಕೊಂಡು ಅಳುತ್ತಾ ಬಂದು ನಿಂತಳು ತಾಯಿ. ಗಂಡನನ್ನು ಕರೆದುಕೊಂಡು ಬರಲು ತಾಕೀತು ಮಾಡಲಾಯಿತು. ಅದೇ ಸ್ಥಿತಿಯಲ್ಲಿ ಇಬ್ಬರೂ ಬಂದು ನಿಂತರು. ಹಿಂದಿನ ರಾತ್ರಿ ಅವನು ಮದ್ಯದಲ್ಲಿ ಮಿಂದೆದ್ದಿದ್ದ ಎನ್ನುವುದರಲ್ಲಿ ಅನುಮಾನವೇ ಇರಲಿಲ್ಲ. ಸಿಟ್ಟು ನೆತ್ತಿಗೇರಿತು. “ಸಾಕಲು ಯೋಗ್ಯತೆ ಇಲ್ಲದಿದ್ದ ಮೇಲೆ ಅದ್ಯಾಕೆ ಮಕ್ಕಳು ಮಾಡಿಕೊಳ್ಳುತ್ತೀರ? ಏನಮ್ಮ ನಿನಗೆ ನಾಚಿಕೆ ಆಗಲ್ಲ್ವಾ?” ಅಂತ ಜೋರು ದನಿ ಮಾಡಿದೆ. ಕೂಡಲೇ ಗೊಳೋ ಅಂತ ಅವಳ ದನಿ ನನ್ನದಕ್ಕಿಂತ ದುಪ್ಪಟ್ಟಾಯ್ತು. “ನಾಚಿಕೆ ಏನ್ ಮೇಡಂ ಜೀವನಾನೇ ಸಾಕಾಗಿದೆ. ಈ ಮಕ್ಕಳಿಗೆ ಅನ್ನಕ್ಕೆ ಒಂದು ದಾರಿ ಮಾಡಿ ಕೊಡಿ ನೀವು ಇವನನ್ನೂ ಬಿಟ್ಟು ಎಲ್ಲಾದರು ಹೋಗಿ, ದುಡ್ಕೊಂಡು ತಿನ್ನ್ಕೋತೀನಿ” ಎನ್ನುತ್ತಾ ಅಳು ಮುಂದುವರೆಸಿದಳು. ಆರು ವರ್ಷಗಳ ಹಿಂದೆ ಮದುವೆಯಾದವಳ ಗಂಡ ಕುಡುಕ. ಎರಡು ಹೆಣ್ಣು ಮಕ್ಕಳನ್ನು ಕೈಗಿತ್ತು ಅಪಘಾತದಲ್ಲಿ ಸತ್ತಿದ್ದ. “ಗಂಡು ದಿಕ್ಕಿಲ್ಲದೆ ಹೆಂಗೆ ಬಾಳ್ವೆ ಮಾಡೋದು ಮೇಡಂ” ಎಂದಳು. ಅದಕ್ಕೇ ಹೀಗೆ ಮುಂದೆ ನಿಂತಿದ್ದವನನ್ನು ಮದುವೆಯಾಗಿದ್ದಳು. “ ಇವನಿಗೆ ಅವರಪ್ಪ ಕೊಟ್ಟಿರೋ ಮನೆ ಇದೆ ಮೇಡಂ. ನೀನು ಮಕ್ಕಳನ್ನು ನೋಡಿಕೊಂಡು ಮನೆಯ
ಬಯಲು ಸೀಮೆಯ ಎಲ್ಲರ ಬಾಯಲ್ಲೂ ಕುಂದಾಪುರ ಹೆಸರು ಹೊರಳುವಂತೆ ಮಾಡಿದ್ದ ಚೈತ್ರ ಕುಂದಾಪುರ ಈಗ ವಂಚನೆ ಪ್ರಕರಣದಲ್ಲಿ ಆರೋಪಿ. ಆಕೆ ಅಪರಾಧಿ ಹೌದೋ ಅಲ್ಲವೋ ಎನ್ನುವುದನ್ನು ನ್ಯಾಯಾಲಯ ತೀರ್ಮಾನ ಮಾಡಲು ಸಮಯವಿದೆ. ಆದರೆ ಆಕೆಯ ಮಾತುಗಾರಿಕೆ ಮತ್ತು ಅದರ ವಿಷಯ ಎಲ್ಲವನ್ನೂ ಕಂಡ ಜನಮಾನಸ ಆಗಲೇ ಅವಳನ್ನು ಅಪರಾಧಿ ಸ್ಥಾನದಲ್ಲಿ ಅನಾಯಸವಾಗಿ ನೋಡುತ್ತಿದೆ. ವಿದ್ಯುನ್ಮಾನ ಮಾಧ್ಯಮಗಳು ಆಗಲೇ ನ್ಯಾಯಾಲಯಕ್ಕೆ ಸಡ್ಡು ಹೊಡೇದ ಪ್ರಕ್ರಿಯೆಯನ್ನು ಶುರು ಮಾಡಿವೆ. ಇವೆಲ್ಲದರ ನಡುವೆ ಚೈತ್ರ ಎನ್ನುವ ಹೆಣ್ಣು ಮಗಳು ಹಲವಾರು ಯುವತಿಯರಿಗೆ ಪಾಠದ ಹಾದಿ ತೋರಿದ್ದು ಮಾತ್ರ ಸುಳ್ಳಲ್ಲ. ಈಗ್ಗೆ ನಾಲ್ಕು ವರ್ಷಗಳ ಹಿಂದೆ ಸಮಿತಿಯ ಟೇಬಲ್ ಮುಂದೆ ಬಂದು ನಿಂತ ಯುವತಿಗೆ ಇನ್ನೂ 18 ತುಂಬಬೇಕಿತ್ತು. ಕೈ ಪೂರ್ತೀ ಸಿಂಹದ ಮುಖವುಳ್ಳ ಹನುಮಂತನ ಚಿತ್ರದ ಹಚ್ಚೆ. ಸ್ಪಷ್ಟ, ಸುಲಲಿತ ಕನ್ನಡ ಮಾತು. ಧರ್ಮ ಸಂರಕ್ಷಣೆ ಎನ್ನುವ ಅಫೀಮು ಕುಡಿಸಿದ್ದು ಅವಳ ದೊಡ್ಡಪ್ಪನ ಮಗ. ಇವಳೂ ಎಲ್ಲರ ಜೊತೆ ಊರೂರು ಸುತ್ತಿದಳು. ಹುಡುಗರ ಜೊತೆ ಜೈಕಾರ ಕೂಗುತ್ತಿದ್ದವಳಿಗೆ ಹೊತ್ತುಗೊತ್ತು ಇಲ್ಲದ ಜೀವನ ಅಭ್ಯಾಸ ಆಯಿತು. ತಂದೆ ಇದನ್ನು ವಿರೋಧಿಸಿ 10ನೆಯ ತರಗತಿಯನ್ನಾದರೂ ಓದಲಿ ಎನ್ನುವ ಆಸೆಯಿಂದ ಕೋಣೆಯೊಳಗೆ ಕೂಡಿ ಹಾಕುತ್ತಿದ್ದ. ಇವಳ ಧರ್ಮದಮಲು ಇಳಿಯಲೊಲ್ಲದು, ಅದಕ್ಕೆ ಸಾಥ್ ಕೊಡುತ್ತಿದ್ದ ಹುಡುಗರು. ಪದೇಪದೇ ಮನೆ ಬಿಟ್ಟು ಅವರೊಡನೆ ಹೋಗುತ್ತಿದ್ದಳು. ಮನೆಯವರು ಸೇರಿಸಿಕೊಳ್ಳದಾದರು. ಪ್ರೀತಿ ಮಾ
ಉದ್ಯೋಗಸ್ಥ ಮಹಿಳೆಯರಿಗಾಗಿ ಸರ್ಕಾರ ನಡೆಸುತ್ತಿರುವ ಹಾಸ್ಟೆಲ್ ಸೌಕರ್ಯದ ಬಗ್ಗೆ DD ಚಂದನದಲ್ಲಿ ದಿನಾಂಕ 07-08-2023 ರಂದು ಓ ಸಖಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಂಪೂರ್ಣ ಮಾಹಿತಿ ನೀಡಲಾಯಿತು. ವಿಷಯ ತಿಳಿಯಲು ಈ ವೀಡಿಯೋ ನೋಡಿ.
Comments
Post a Comment