ಅತುಲ್ ಸುಭಾಷ್ ಎನ್ನುವ ವ್ಯಕ್ತಿ ತನ್ನ ಹೆಂಡತಿ ಮತ್ತು ಆಕೆಯ ತಂದೆತಾಯಿ ಕೊಡುತ್ತಿರುವ ಕಾಟವನ್ನು ತಾಳಲಾರದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎನ್ನುತ್ತಾ ನೂರಕ್ಕೂ ಹೆಚ್ಚು ಪುಟಗಳ ವಿವರ ಬರೆದಿಟ್ಟು ಅದರ ವೀಡಿಯೊ ಕೂಡ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿಷಯ ಇನ್ನೂ ಮರೆಯಲಾಗಿಲ್ಲ. ಮೇಲ್ನೋಟಕ್ಕೆ ಆತನ ಪತ್ನಿ ಅಪರಾಧಿಯಂತೆ ಕಾಣುತ್ತಿದ್ದಾಳೆ ಹಾಗಾಗಿ ತನಿಖೆ ಆಗಬೇಕು ಎಂದು ಉಚ್ಚನ್ಯಾಯಾಲವೂ ಹೇಳಿತ್ತು. ಈಗ ಆಕೆಗೆ ಜಾಮೀನು ಸಿಕ್ಕಿದೆ. ಈ ಘಟನೆಯ ನಂತರ ನೊಂದ ಗಂಡ ಎಂದು ಹೇಳಿಕೊಂಡು ಮತ್ತೊಂದು ಆತ್ಮಹತ್ಯೆಯೂ ಆಯಿತು. ವಿಷಾದವೆಂದರೆ ನಿನ್ನಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೆಂಡತಿಯರನ್ನು ಬೆದರಿಸಲು ಗಂಡಂದಿರು ಇದನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಸಾಧ್ಯತೆ ಇಲ್ಲದಿಲ್ಲ. ರೇವಮ್ಮನ ಅಣ್ಣನ ಮಗ ಜೈಲಿನಲ್ಲಿದ್ದಾನೆ. ಅವನ ಹೆಂಡತಿ ಜಾಮೀನು ಕೊಡಿಸಲು ಇವಳ ಹಿಂದೇರಿದ್ದಾಳೆ. ಆಗುವುದಿಲ್ಲ ಎಂದವಳಿಗೆ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುವ ಒತ್ತಡ ಹಾಕುತ್ತಿದ್ದಾಳೆ. ಹೆದರಿದ ರೇವಮ್ಮ ಆಳುತ್ತಾ ಆಫೀಸಿಗೆ ಬಂದಿದ್ದಳು. ನೀನೀಗ ನನ್ನ ಜೊತೆ ಓಡಿ ಬರದಿದ್ದರೆ, ಮದುವೆ ಆಗದಿದ್ದರೆ, ಮಲಗದಿದ್ದರೆ, ದುಡ್ಡು ಕೊಡದಿದ್ದರೆ, ಸಾಲ ಹಿಂದಿರುಗಿಸು ಅಂತ ಕೇಳಿದರೆ, ಬಾಡಿಗೆಗೆ ಮನೆ ಬಿಡಿಸಿದರೆ, ಕೆಲಸ ಕೊಡದಿದ್ದರೆ ಹೀಗೆ ಯಾವುದೇ ಕಾರಣವನ್ನು ಕೊಟ್ಟು “ನ...
ಸವಾಲು ದಾಟುವ ಸಂಭ್ರಮ - ಮಹಿಳಾ ದಿನಾಚಾರಣೆಗಾಗಿ ಈ ದಿನದ ವಿಜಯಕರ್ನಾಟಕದಲ್ಲಿ ನಾ ಬರೆದ ಲೇಖನ ಹೇಗಿದೆ. ದಯವಿಟ್ಟು ಓದಿ 🙏 ******* ಅಭಿರುಚಿಯಿರುವವರಿಗೆ ಪ್ರವಾಸವೆನ್ನುವುದು ಆತ್ಮಸಾಂಗತ್ಯದ ಪರಮಾವಧಿ. ಅದರಲ್ಲೂ ಒಂಟಿಯಾಗಿ, ತಿಳಿಯದ ಜಾಗಕ್ಕೆ ಹೋಗುವ, ಅಪರಿಚಿತರೊಡನೆ ಒಡನಾಡುವ ಪ್ರವಾಸವೆಂದರೆ ಅಂತರಂಗಕ್ಕೆ ಪಯಣಿಸುವ ಕುಂಡಲಿನಿ ಯಾತ್ರೆಯಂತೆ. ’ಜಗದ ಜಂಜಡ ಬೇಡ ನಿನಗೆ ನಾನು ಆಗುವೆ ಕಣ್ಣು ನಿನಗೆ’ ಎನ್ನುತ್ತಾ ಪಾರದರ್ಶಕ ಗೆಳೆಯನೊಬ್ಬ ತನ್ನನ್ನೇ ಪ್ರೇಯಸಿಯಾಗಿಸಿಕೊಂಡಿದ್ದಾನೇನೋ ಎನ್ನುವಂತಹ ಅಮೂಲ್ಯ ಭಾವವನ್ನು ಅನುಭವಿಸಿದ್ದೇನೆ ಪ್ರವಾಸದಲ್ಲಿ. ಉದ್ಯೋಗಸ್ಥ ಮಹಿಳೆ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗುವಾಗ ಇಲ್ಲದ ಕೌತುಕ, ಮೆಚ್ಚುಗೆ, ಒಂದು ತೂಕ ಅಸಹನೆ ಮಹಿಳೆಯೊಬ್ಬಳು ಒಂಟಿ ಪ್ರವಾಸಕ್ಕೆ ಹೊರಟಿದ್ದಾಳೆ ಎಂದರೆ ಇರುತ್ತದೆ ಎನ್ನುವುದು ಸೋಜಿಗ. ಹಾಗೆ ಊರೂರು ಸುತ್ತುವವರು ತಮ್ಮ ಕುಟುಂಬದ ಹೊಣೆಯನ್ನು ಬದಿಗೊತ್ತಿರುವವರೋ, ಮತ್ತ್ಯಾವುದೇ ಯಾವುದೇ ಜವಾಬ್ದಾರಿ ಇಲ್ಲದವರೋ, ವಿಪರೀತ ದುಡ್ಡು ಇರುವವರಾಗಿರುತ್ತಾರೆ ಎನ್ನುವುದೇ ಬಹುಪಾಲು ಜನರ ಆಲೋಚನೆ. ಆದರೆ ಎಲ್ಲವನ್ನೂ ನಿಭಾಯಿಸಿಯೂ ತನ್ನ ಆಸಕ್ತಿಗಾಗಿ ಸಮಯ ಮತ್ತು ಸೌಲಭ್ಯವನ್ನು ಒದಗಿಸಿಕೊಳ್ಳಲು ಮನಸ್ಸು ಮಾಡುವ ಮಹಿಳೆಯ ಬಗ್ಗೆ ಸಮಾಜಕ್ಕೆ ಅಸಡ್ಡೆ ಇರುವಂತೆಯೇ ತಮಗಾಗದ್ದನ್ನು ಮತ್ತೊಬ್ಬರು ಮಾಡುತ್ತಿದ್ದಾರೆ ಎನ್ನುವ ಖುಷಿ ಅನುಭವಿಸುವ...
ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಮ್ ವಿಕಲತೆ ಇರುವುದಾಗಿ ಹೇಳಿದರು. ಅವನ ಆಸಕ್ತಿಯನ್ನು ಗಮನಿಸಿ ಕ್ಯಾಂಡಲ್ ಮಾಡುವುದರಲ್ಲಿ ತರಬೇತಿ ಕೊಡಿಸಲಾಯ್ತು. ಖ್ಯಾತ ಗೃಹೋದ್ಯಮದವರು 15ರ ಇವನಿಗೆ ಸಂಬಳಕ್ಕೆ ಕೆಲಸ ಕೊಟ್ಟರು. ಬಾಲಕನ ಕೈಯೆಲ್ಲಾ ಮೇಣದಿಂದ ಸುಡಿಸಿಕೊಂಡು ಜಡ್ಡುಗಟ್ಟಿತ್ತು. ಅವನ ಸಮಸ್ಯೆ ಮತ್ತಷ್ಟು ಹೆಚ್ಚಿತು. 27 ವರ್ಷದ ಸಂತೋಷ್ ಶ್ರೀಮಂತ ಉದ್ಯಮಿಯ ಮಗ. ಯಾರೊಡನೆಯೋ ಬೆರೆಯದ, ತನ್ನದೇ ಲೋಕದಲ್ಲಿ ತಲ್ಲೀನನಾಗಿರುವವನಿಗೆ ಮದುವೆ ಮಾಡಿಸಿದರೆ ಸರಿಹೋಗುತ್ತಾನೆ ಎಂದ ಜ್ಯೋತಿಷ್ಯ ನಂಬಿ ಮದುವೆ ಮಾಡಿದ್ದಾರೆ. ಹೆಂಡತಿಗೆ ಇವನೊಡನೆ ಬಾಳುವುದು ಅಸಾಧ್ಯ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿದಿದೆ. ವೈದ್ಯರು ಅವನ ಬಾಲ್ಯದಲ್ಲಿಯೇ ಆಟಿಸಮ್ ಇದೆ ಎಂದು ಹೇಳಿದ್ದರೂ ಯಾವುದೇ ಚಿಕಿತ್ಸೆ ಕೊಡಿಸದ ಪರಿಣಾಮ ಇವತ್ತು ಅವರ ಮದುವೆ ವಿಚ್ಚೇಧನಕ್ಕಾಗಿ ನ್ಯಾಯಾಲಯದಲ್ಲಿದೆ. ಭಾರತದಲ್ಲಿ ಪ್ರತೀ 40 ವಯಸ್ಕ ಗಂಡಸರಲ್ಲಿ ಒಬ್ಬ ವ್ಯಕ್ತಿ ಆಟಿಸಮ್ ವೈಕಲ್ಯತೆಯಿಂದ ಬಳಲುತ್ತಿದ್ದಾರೆ ಎನ್ನುತ್ತದೆ ಒಂದು ಅಂಕಿಅಂಶ. ಆದರೆ ಸಂವಿಧಾನದ ಪರಿಚ್ಚೇಧ 14 ಮತ್ತು 15 ಅವರುಗಳಿಗೆ ಕೂಡ ಯಾವುದೇ ತಾರತಮ್ಯವಿಲ್ಲದೆ ಬದುಕುವ ಹಕ್ಕನ್ನು ಖಾತ್ರಿ ಪಡಿಸಿದೆ. ಹಾಗಾಗಿಯೇ ಅವರುಗಳ ಅವಶ್ಯಕತೆಗಳನ್ನು ಗಮನಿಸಿ ಸ...
Comments
Post a Comment