Posts

Showing posts from February, 2025

ಆಂದೋಲನದಲ್ಲಿ ಶಿವ

Image
  ಉತ್ತರಾಖಂಡವೇ ಪುರಾಣ ಪುಣ್ಯಕಥೆಗೆ ಹಿಡಿದ ಕನ್ನಡಿ. ಪ್ರಕೃತಿ ಮೈಹರವಿಕೊಂಡು ಸೌಂದರ್ಯವನ್ನು ಕೊಡವಿಕೊಳ್ಳುತ್ತಿರುವ ಈ ಭೂಮಿಯಲ್ಲಿ ಸ್ವಯಂಭುಗೊಂಡಿದ್ದಾನೆ ಕೇದಾರನಾಥ. ಅವನನ್ನು ಮುಟ್ಟಲು ಮಾರ್ಗ ಹಲವು. ನಾನು ಆಯ್ಕೆ ಮಾಡಿಕೊಂಡಿದ್ದು ರಿಷಿಕೇಶದಿಂದ ರಸ್ತೆ ಪ್ರಯಾಣ. ರಾಂಪುರವೆನ್ನುವ ಊರು ತಲುಪುವಷ್ಟರಲ್ಲಿ ರಾತ್ರಿಯಾಗಿತ್ತು. ಮಾರನೆಯ ದಿನದ ಪ್ರಯಾಣದಲ್ಲಿ ಸಿಕ್ಕಿದ್ದು ಅಲಕಾನಂದ-ಮಂದಾಕಿನಿಯರ ಸಂಗಮವಾದ ರುದ್ರಪ್ರಯಾಗವು ಶ್ರೀರಾಮಚಂದ್ರ ಪೂರ್ವಿಕರಿಗೆ ತರ್ಪಣಕೊಟ್ಟ ಸ್ಥಳ. ನಂತರ ಸಿಕ್ಕಿದ್ದು ಭಾಗೀರಥಿ-ಮಂದಾಕಿನಿಯರ ಸಂಗಮದ ದೇವಪ್ರಯಾಗ. ಇಲ್ಲಿ ಬ್ರಹ್ಮ ತಪಸ್ಸು ಮಾಡಿದ ಗುರುತಿಗೊಂದು ಶ್ರೀರಾಮ ಮಂದಿರವಿದೆ. ಇನ್ನೊಂದಷ್ಟು ದೂರದಲ್ಲಿ ತ್ರಿಯುಗ ನಾರಾಯಣನ ಸ್ಥಾನ. ಪಾರ್ವತಿ ಕಲ್ಯಾಣ ನಡೆದದ್ದು ಎಂದು ಹೇಳಲಾಗುವ ಮನಮೋಹಕ ಮಂದಿರವದು. ಶಿವ ಪಾರ್ವತಿಯರು ಸಪ್ತಪದಿ ತುಳಿದುದರ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಅದೇ ಅಗ್ನಿಯನ್ನು ಅಂದಿನಿಂದ ಈ ಘಳಿಗೆಯವರೆಗೂ ಆರದಂತೆ ಕಾಯುತ್ತಿದ್ದಾರೆ ಅಲ್ಲಿನ ಭಕ್ತರು. ಅಲ್ಲಿಂದ ತಲುಪಿದ್ದು ಕೇದಾರನಾಥನ ತಪ್ಪಲಿಗೆ. ಭಕ್ತರನ್ನು ಮೀಯಿಸಿ ಶುಚಿಗೊಳಿಸುವ ಬಿಸಿನೀರಿನ ಬುಗ್ಗೆಯ ಗೌರಿಕುಂಡ ಈ ತಪ್ಪಲಿಗೆ ಆತುಕೊಂಡಿದೆ. ಇಲ್ಲಿಂದ ಮುಂದೆ ದುರ್ಗಮ ದಾರಿ. ಕೋಲೂರಿ ಹತ್ತಿ ಹೋಗಬೇಕು ಇಲ್ಲವೇ ಅಲ್ಲಿನ ಕುದುರೆ ಏರಿ ಹೋಗಬೇಕು. ಅದೂ ಸಾಧ್ಯವಿಲ್ಲವೆನಿಸಿದರೆ ಇಬ್ಬರು ಪಾಳಿ ಬದಲಿಸುತ್ತಾ ಹೊತ್ತು ಸಾಗುವ ಪಲ್ಲಕ್ಕಿಯಂಥ...

What is a family - ಕುಟುಂಬ ಎಂದರೆ

Image
 15-02-2025 ಇವತ್ತಿನ ಪ್ರಜಾವಾಣಿಯಲ್ಲಿ ಹೀಗೆ ಬರೆದಿದ್ದೇನೆ. ದಯವಿಟ್ಟು ಓದಿ ಅಭಿಪ್ರಾಯ ತಿಳಿಸಿ 🙏 ********  ಎಲ್ & ಟಿ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ಎಸ್ ಎನ್ ಸುಬ್ರಹ್ಮಣಿಯನ್ ಅವರು ಜಾಗತಿಕವಾಗಿ ಜಾಗೃತಗೊಂಡಿರುವ ಸ್ಪರ್ಧೆಯಲ್ಲಿ ಭಾರತವನ್ನು ಆರ್ಥಿಕವಾಗಿ ಮುನ್ನೆಲೆಗೆ ತರಬೇಕು ಎನ್ನುವ ಉದ್ದೇಶದಿಂದ ಕೆಲಸಗಾರರು ಭಾನುವಾರಗಳಂದೂ ರಜೆ ತೆಗೆದುಕೊಳ್ಳದೆ ವಾರಕ್ಕೆ 90 ಘಂಟೆಗಳ ಕಾಲ ಕೆಲಸ ಮಾಡಬೇಕು ’ಎಷ್ಟೆಂದು ಗಂಡ ಹೆಂಡತಿಯನ್ನು, ಹೆಂಡತಿ ಗಂಡನನ್ನು ದಿಟ್ಟಿಸುತ್ತಾ ಕೂರುವುದು’ ಎನ್ನುವ ಬೀಸು ಹೇಳಿಕೆಯನ್ನು ನೀಡಿರುವುದು ಈಗ ಕಾರ್ಮಿಕ ವಲಯದ ಕಾವೇರಿಸಿದೆ. ಅಸಮಾನ ಸಂಬಳದಿಂದ ಹಿಡಿದು, ಮಹಿಳೆಯರಿಗೆ ಮಾಡಿದ ಅವಮಾನ ಎನ್ನುವವರೆಗೂ ಚರ್ಚೆ ನಡೆಯುತ್ತಿದೆ. ಆದರೆ ಕುಟುಂಬ ಎಂದರೆ, ಸಂಬಂಧಗಳು ಎಂದರೆ ಕೇವಲ ಗಂಡ ಹೆಂಡತಿಯ ನಡುವಿನದ್ದು ಎನ್ನುವ ಭಾವವನ್ನು ಮನಸ್ಸಿನಲ್ಲಿ ಬಿತ್ತಿದಾಗ ಆಗುವ ಅಪಾಯಗಳ ಬಗ್ಗೆ ಯಾರ ಗಮನವು ಹೋಗದಿರುವುದು ವಿಪರ್ಯಾಸ. ಹಾಸ್ಯ ಎನ್ನುತ್ತಾ ಕೆಲವು ವರ್ಷಗಳ ಹಿಂದೆ ಕಥೆಯೊಂದು ಓಡಾಡುತ್ತಿತ್ತು. ಮಹಿಳೆಯೊಬ್ಬಳು ಕಾರ್ಪೋರೇಟ್ ಕಂಪನಿಯಲ್ಲಿ ಕೆಲಸಕ್ಕಾಗಿ ಇಂಟರ್ವ್ಯೂಗೆ ಹೋದಾಗ ಒಂದು ಪ್ರಶ್ನೆಗೆ ಉತ್ತರವಾಗಿ ತನ್ನದು ಜಾಯಿಂಟ್ ಫ್ಯಾಮಿಲಿ ಎನ್ನುತ್ತಾಳೆ. ಅದಕ್ಕೆ ಅಧಿಕಾರಿಯೊಬ್ಬರು ಹಾಗಾದರೆ ನಿಮ್ಮ ಕುಟುಂಬದಲ್ಲಿ ಯಾರ್ಯಾರು ಇದ್ದೀರಾ ಎಂದು ಕೇಳಿದಾಗ ತಾನು ತನ್ನ ಗಂಡ ಜಾಯಿಂಟಾಗಿ ಇದ್ದೀವಿ ಎನ್ನುತ...