ರವಿ ಬಾಲ್ಯದಿಂದಲೂ ಬೇರೆ ಮಕ್ಕಳಿಗಿಂತ ವಿಭಿನ್ನ. ಶಾಲೆಯ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇಲ್ಲ. ವಯಸ್ಸಿಗೆ ಮೀರಿದ ದೇಹ. ಯಾರೊಂದಿಗೂ ಮಾತನಾಡಲು ಆಸಕ್ತಿ ಇಲ್ಲದ ಬಾಲಕನಿಗೆ ತಜ್ಞರು ಆಟಿಸಮ್ ವಿಕಲತೆ ಇರುವುದಾಗಿ ಹೇಳಿದರು. ಅವನ ಆಸಕ್ತಿಯನ್ನು ಗಮನಿಸಿ ಕ್ಯಾಂಡಲ್ ಮಾಡುವುದರಲ್ಲಿ ತರಬೇತಿ ಕೊಡಿಸಲಾಯ್ತು. ಖ್ಯಾತ ಗೃಹೋದ್ಯಮದವರು 15ರ ಇವನಿಗೆ ಸಂಬಳಕ್ಕೆ ಕೆಲಸ ಕೊಟ್ಟರು. ಬಾಲಕನ ಕೈಯೆಲ್ಲಾ ಮೇಣದಿಂದ ಸುಡಿಸಿಕೊಂಡು ಜಡ್ಡುಗಟ್ಟಿತ್ತು. ಅವನ ಸಮಸ್ಯೆ ಮತ್ತಷ್ಟು ಹೆಚ್ಚಿತು. 27 ವರ್ಷದ ಸಂತೋಷ್ ಶ್ರೀಮಂತ ಉದ್ಯಮಿಯ ಮಗ. ಯಾರೊಡನೆಯೋ ಬೆರೆಯದ, ತನ್ನದೇ ಲೋಕದಲ್ಲಿ ತಲ್ಲೀನನಾಗಿರುವವನಿಗೆ ಮದುವೆ ಮಾಡಿಸಿದರೆ ಸರಿಹೋಗುತ್ತಾನೆ ಎಂದ ಜ್ಯೋತಿಷ್ಯ ನಂಬಿ ಮದುವೆ ಮಾಡಿದ್ದಾರೆ. ಹೆಂಡತಿಗೆ ಇವನೊಡನೆ ಬಾಳುವುದು ಅಸಾಧ್ಯ ಎನ್ನುವುದು ಕೆಲವೇ ದಿನಗಳಲ್ಲಿ ತಿಳಿದಿದೆ. ವೈದ್ಯರು ಅವನ ಬಾಲ್ಯದಲ್ಲಿಯೇ ಆಟಿಸಮ್ ಇದೆ ಎಂದು ಹೇಳಿದ್ದರೂ ಯಾವುದೇ ಚಿಕಿತ್ಸೆ ಕೊಡಿಸದ ಪರಿಣಾಮ ಇವತ್ತು ಅವರ ಮದುವೆ ವಿಚ್ಚೇಧನಕ್ಕಾಗಿ ನ್ಯಾಯಾಲಯದಲ್ಲಿದೆ. ಭಾರತದಲ್ಲಿ ಪ್ರತೀ 40 ವಯಸ್ಕ ಗಂಡಸರಲ್ಲಿ ಒಬ್ಬ ವ್ಯಕ್ತಿ ಆಟಿಸಮ್ ವೈಕಲ್ಯತೆಯಿಂದ ಬಳಲುತ್ತಿದ್ದಾರೆ ಎನ್ನುತ್ತದೆ ಒಂದು ಅಂಕಿಅಂಶ. ಆದರೆ ಸಂವಿಧಾನದ ಪರಿಚ್ಚೇಧ 14 ಮತ್ತು 15 ಅವರುಗಳಿಗೆ ಕೂಡ ಯಾವುದೇ ತಾರತಮ್ಯವಿಲ್ಲದೆ ಬದುಕುವ ಹಕ್ಕನ್ನು ಖಾತ್ರಿ ಪಡಿಸಿದೆ. ಹಾಗಾಗಿಯೇ ಅವರುಗಳ ಅವಶ್ಯಕತೆಗಳನ್ನು ಗಮನಿಸಿ ಸ...
ಈಗ ಮಕ್ಕಳಿಗೆ ಶಾಲಾ ರಜ. ಬೆಳಗಿನ ವಾಕಿಂಗ್ ಹೋದಾಗ ಬೀದಿಬದಿಯಲ್ಲಿ ಆಡುತ್ತಿರುವ ಹತ್ತಾರು ಮಕ್ಕಳು ಸಿಗುತ್ತಾರೆ, ಮುದ್ದಾಗಿರುತ್ತಾರೆ ಕೂಡ. ಅದರ ಅರ್ಥ ನಾವುಗಳು ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳಬಹುದು ಅಂತಲ್ಲ! ಬೀದಿಯಲ್ಲಿ ಆಡುತ್ತಿದ್ದಾರೆ ಎಂದ ಮಾತ್ರಕ್ಕೆ ಅವರುಗಳು ಹೊಟ್ಟೆಗಿಲ್ಲದವರು, ದಿಕ್ಕೆಟ್ಟವರು, ಗತಿಯಿಲ್ಲದವರು ಎನ್ನುವ ಷರಾ ಬರೆಯಬಹುದು ಅಂತಲ್ಲ! ಯಾವ ಶಾಲೆ, ಎಷ್ಟನೇ ತರಗತಿ, ಹೆಸರು ಏನು, etc etc ಮಾತುಗಳನ್ನು ಅವರೊಂದಿಗೆ ಆಡಬೇಕು ಅಂತಲ್ಲ! ಮನೆಯಲ್ಲಿ ಉಳಿದ ಊಟ ಅಥವಾ ಅಲ್ಲೇ ಇರುವ ಕೈಗಾಡಿಯಲ್ಲಿ ಪಲಾವ್, ಚಾಕಲೇಟ್ ವಗೈರೆ ಕೊಡಿಸಿ ನಮ್ಮ ಅಹಂ ತಣಿಸಿಕೊಳ್ಳಬೇಕು ಅಂತಲ್ಲ! ಅವರ ತಲೆಸವರುವ, ಕೆನ್ನೆ ಹಿಂಡುವ ಹಿರಿತನ ನಮಗಿದೆ ಅಂತಲ್ಲ! ನಮಗೊಂದು ಒಳ್ಳೆಯ ಹಾಸ್ಟೆಲ್ ಗೊತ್ತು ಅಲ್ಲಿ ಒಳ್ಳೆಯ ಅನುಕೂಲಗಳಿವೆ ಸೇರಿಸುತ್ತೀವಿ ಎಂದು ತಂದೆತಾಯಿಗಳಿಗೆ ಆಮಿಷ ತೋರಿಸಬೇಕು ಅಂತಲ್ಲ! ಹಾಗಾಗಿ ನೋಟವನ್ನು ಮಾತ್ರ ಆಸ್ವಾದಿಸಿ ಮುಂದಕ್ಕೆ ಹೋಗೋಣ. ಕಂಡ ಮಕ್ಕಳು ನಿಜಕ್ಕೂ ಅಸುರಕ್ಷಿತ, ಆತಂಕದ ಸ್ಥಿತಿಯಲ್ಲಿ ಇದ್ದಾರೆ ಎನಿಸಿದರೆ ಮಾತ್ರ 1098 ಅಥವಾ 112 ಗೆ ಕರೆ ಮಾಡಬೇಕು ಅಷ್ಟೇ. ಈಗ ಮಕ್ಕಳ ಸುರಕ್ಷತೆಯ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಚುರುಕಾಗಿದೆ. ಸರ್ಕಾರ ಹಲವಾರು ಯೋಜನೆಗಳಿಗೆ ಹಣವನ್ನೂ, ಸ್ಥಳವನ್ನೂ ನೀಡಿದೆ. ಹಾಗಾಗಿ ನಾವುಗಳು ನಮ್ಮ ಪಾತ್ರವನ್ನು ನಿರ್ವಹಿಸಿದರೆ ಸಾಕು, ನಮ್...
ಪುಸ್ತಕದ ಹೆಸರು : " ಅವಳ ಇವಳ ಸುತ್ತ " ಲೇಖಕಿ : ಎಸ್ ಸುಶೀಲ ಚಿಂತಾಮಣಿ ಸಪ್ನಾ ಬುಕ್ ಹೌಸ್ ಪ್ರಕಟಣೆ ಮನುಷ್ಯ ನೆಮ್ಮದಿಯಾಗಿ ಇದ್ದಾನೆ ಎನ್ನಲು ಒಂದೇ ಕಾರಣ ಸಾಕು ಆದರೆ ಬದುಕಿನಲ್ಲಿಯ ಅಶಾಂತಿಗೆ ನಾನಾ ಸ್ವರೂಪಗಳು. ಅದರಲ್ಲೂ ಹೆಂಗಸರು ದಾಂಪತ್ಯದೊಳಗೆ ಕತ್ತು ಹಿಸುಕಿಕೊಳ್ಳುತ್ತಲೇ ಕೆಲವೊಮ್ಮೆ ಕಣ್ಣ ನೀರಿಗೂ ತಾವು ಕೊಡಲಾಗದೆ ಬದುಕುವ ಸ್ಥಿತಿ ಬರಹಕ್ಕೆ ನಿಲುಕದು. ಲೇಖಕಿ ಶ್ರೀಮತಿ ಎಸ್ ಸುಶೀಲ ಚಿಂತಾಮಣಿ ಅವರು ರಾಜ್ಯದ ಹಿರಿಯ ವಕೀಲರು. ಮೀಡಿಯೇಷನ್ ಕೇಂದ್ರದ ಮುಖ್ಯ ಸಂಧಾನಕಾರರು. ತಾವು ಕಂಡ, ನಿರ್ವಹಿಸಿದ ಪ್ರಕರಣಗಳನ್ನು 38 ಅಧ್ಯಾಯಗಳಲ್ಲಿ ಸಂಕ್ಷಿಪ್ತವಾಗಿ ಕಟ್ಟಿಕೊಟ್ಟಿದ್ದಾರೆ. ಅಧ್ಯಾಯಗಳ ಸಂಕ್ಷಿಪ್ತತೆ ನೋಡುವಾಗ ಅನಿಸಿದ್ದು ' ನೋವುಗಳನ್ನು ನಲಿವಿನಷ್ಟು ವಿಸ್ತರಿಸಲು ಅಕ್ಷರಗಳು ಶಕ್ಯವಲ್ಲ'. ಈ ಪುಸ್ತಕದಲ್ಲಿ ಪದಗಳಿಗಿಂತ ಮೌನದ್ದೇ ಹೆಚ್ಚು ಕೆಲಸ. ಓದುಗನ ಕೊರಳುಬ್ಬಿ ಬರದಿದ್ದರೆ ಅಕ್ಷರತೆಯ ಮೇಲಾಣೆ. ಪ್ರತೀ ಹೆಣ್ಣಿನ ಜೀವನ ಯಾನವನ್ನು ಕೈಯಲ್ಹಿಡಿದ ಪುಸ್ತಕದಿಂದ ಕಣ್ಣಿನ ಮೂಲಕವೇ ನಮ್ಮದೇ ಪ್ರಯಾಣವಾಗಿಸಿಕೊಳ್ಳುವ ನಿಡಿದಾದ ನಿಟ್ಟುಸಿರು ' ಅವಳ ಇವಳ ಸುತ್ತ '. ಲೇಖಕಿಯೇ ಹೇಳಿರುವಂತೆ ' ಇದು ಹೆಣ್ಣು ಮಕ್ಕಳ ಸುತ್ತಲಿನ ಕೆಲವು ಘಟನೆಗಳ ಸಂಕಲನ. ಈ ಘಟನೆಗಳಲ್ಲಿ ಹಲವು ನಮ್ಮ ನಿಮ್ಮ ಕಣ್ಣಿಗೆ ಬಿದ್ದ ಅಥವಾ ನಮ್ಮ ನಿಮ್ಮ ಜೀವನದ ಘಟನೆಗಳೇ ಹೌದೇನೋ ಎನ್ನಿಸಲೂಬಹುದು ಎಲ್ಲೋ ಒಂದು ಕಡೆ ಇವು...
Comments
Post a Comment